ಸಿದ್ದಾಪುರ: ಹೆಗ್ಗರಣಿ ಬಳಿ ಕಾರೊಂದು ಹಳ್ಳಕ್ಕೆ ಬಿದ್ದು ಕೊಚ್ಚಿಹೋಗಿದ್ದು ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹುಬ್ಬಳ್ಳಿ ಮೂಲದ ಅಕ್ಷತಾ, ನಿಶ್ಚಲ್, ಸುಷ್ಮಾ ಹಾಗೂ ರೋಷನ್ ಎಂಬುವವರು ಮೃತಪಟ್ಟಿದ್ದಾರೆನ್ನಲಾಗುತ್ತಿದೆ. ಉಂಚಳ್ಳಿ ಜಲಪಾತ ವೀಕ್ಷಿಸಿ ಊರಿಗೆ ವಾಪಸ್ಸಾಗುತ್ತಿದ್ದ ಹುಬ್ಬಳ್ಳಿ ಮೂಲದ ಆರು ಮಂದಿ ಇದ್ದ ಕಾರ ಕೋಡ್ನಮನೆ ಎಂಬಲ್ಲಿ ಸೇತುವೆಯಿಂದ ಕೆಳಗುರುಳಿದೆ. ಕಾರು ನೀರಿನಲ್ಲೇ ಅರ್ಧ ಕಿಲೋ ಮೀಟರ್ ದೂರ ಹೋಗಿ ಬಿದ್ದಿದ್ದು, ಗುರುವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಬೆಳಕಿಗೆ ಬಂದಿದೆ.
No comments:
Post a Comment