ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಲೆಕ್ಕಾಚಾರಕ್ಕೂ ಮೀರಿ ಹಾನಿ ಉಂಟು ಮಾಡುತ್ತಿದ್ದು, ಆರೋಗ್ಯ ವ್ಯವಸ್ಥೆಯನ್ನು ಅಲುಗಾಡಿಸುತ್ತಿದೆ. ಸದ್ಯ ಸೋಂಕು ನಿಯಂತ್ರಣಕ್ಕೆ ಲಸಿಕೆಯೇ ಪರಿಣಾಮಕಾರಿ ಮಾರ್ಗ ಎಂಬ ಅಭಿಪ್ರಾಯವನ್ನು ಬಹುತೇಕ ತಜ್ಞರು ವ್ಯಕ್ತಪಡಿಸಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಡುವೆ ಯುವ ಸಮೂಹ ಕೊರೊನಾ ಲಸಿಕೆ ತೆಗೆದುಕೊಳ್ಳಲಾರಂಭಿಸಿದರೆ ಇನ್ನೊಂದು ಸಮಸ್ಯೆ ಎದುರಾಗುವ ಸಾಧ್ಯತೆ ಕಂಡುಬಂದಿದೆ. ಕೊರೊನಾ ಲಸಿಕೆ ಪಡೆದ 28 ದಿನ ಯಾರೂ ರಕ್ತದಾನ ಮಾಡುವಂತಿಲ್ಲ ಎಂದು ವೈದ್ಯರು ಹೇಳಿದ್ದು, ಲಸಿಕೆ ಪಡೆಯುವುದಕ್ಕೂ ಮುನ್ನ ರಕ್ತದಾನ ಮಾಡಿ ರಕ್ತದ ಕೊರತೆ ನೀಗಿಸಿ ಎಂದು ರಕ್ತನಿಧಿ ಕೇಂದ್ರದಿಂದ ಜಾಗೃತಿ ಮೂಡಿಸಲಾಗುತ್ತಿದೆ.
ಮೊದಲ ಹಂತದಲ್ಲಿಲಾಕ್ಡೌನ್ ಆದಾಗ ಸಮಸ್ಯೆ ಆಗಿತ್ತು
ಕೊರೊನಾ ನಿಯಂತ್ರಣಕ್ಕಾಗಿ ಮೊದಲ ಹಂತದಲ್ಲಿ ಲಾಕ್ಡೌನ್ ಆದಾಗ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಗದೇ ಸಮಸ್ಯೆ ಆಗಿತ್ತು. ಈ ಬಾರಿ ಫೆಬ್ರವರಿ ತಿಂಗಳಲ್ಲೂ ತೊಂದರೆ ಉಂಟಾಗಿತ್ತು. ಜತೆಗೆ, ಕೊರೊನಾ ಪಾಸಿಟಿವ್ ಆಗಿ ಗುಣಮುಖರಾದವರೂ ನಾನಾ ಕಾರಣಗಳಿಂದ ರಕ್ತದಾನ ಮಾಡುವಂತಿಲ್ಲವಾದ್ದರಿಂದ ರಕ್ತದ ಕೊರತೆ ಎದುರಾದರೆ ಸಮಸ್ಯೆ ಆಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಯುವಕರು ಲಸಿಕೆ ಸ್ವೀಕರಿಸುವ ಮುನ್ನವೇ ರಕ್ತದಾನ ಮಾಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ.
No comments:
Post a Comment